Spread the love

ಬೆಂಗಳೂರು: ನಾಳೆ ಬೆಳಿಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ವಿವಾದದ ( Hijab Row ) ಅರ್ಜಿಯ ತೀರ್ಪು ಪ್ರಕಟಿಸಲಾಗುತ್ತಿದ್ದು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಒಂದು ವಾರ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ನಾಳೆ ಹೈಕೋರ್ಟ್ ನಿಂದ ಹಿಜಾಬ್ ವಿವಾದದ ಅರ್ಜಿಯ ಕುರಿತಂತೆ ತೀರ್ಪು ಪ್ರಕಟವಾಗಲಿರುವ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಶಾಲಾ-ಕಾಲೇಜುಗಳಿಗೆ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯಾಧ್ಯಂತ ಶಾಲಾ-ಕಾಲೇಜುಗಳ ಬಳಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ.

ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇಂದು ಎಲ್ಲಾ ಡಿಸಿಪಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ರಾತ್ರಿ 10.30ಕ್ಕೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನಗರದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳ ಬಳಿಯಲ್ಲಿ ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚೆ ನಡೆಸಲಾಗಿದ್ದು. ಅಲ್ಲದೇ ಬೆಂಗಳೂರು ನಗರಾದ್ಯಂತ ನಾಳೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನೂ ರಾತ್ರಿ 8.30ಕ್ಕೆ ಆಯಾ ಜಿಲ್ಲೆಗಳಲ್ಲಿಯೂ ಡಿಸಿ, ಎಸ್ಪಿಗಳು ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ.


Spread the love