Spread the love

ಪಾವಗಡ ತಾಲ್ಲೂಕಿನ ಪಳವಳ್ಳಿ ಕೆರೆ ಮೇಲೆ ಇಂದು ಬೆಳಗ್ಗೆ 9 ಗಂಟೆ ಸಮಯದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಪಾವಗಡ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಸಾರಿಗೆ ಸಚಿವ ಬಿ ಶ್ರೀರಾಮುಲು ಮುಖ್ಯ ಮಂತ್ರಿಗಳು ನನಗೆ ಪಾವಗಡಕ್ಕೆ ಕಳುಹಿಸಿದ್ದಾರೆ ,ನಾನು ವ್ಯಯುಕ್ತಿಕವಾಗಿ ಗಾಯಳುಗಳಿಗೆ 25 ಸಾವಿರ ರೂಪಾಯಿಗಳು.ಗಂಬಿರವಾಗಿ ಗಾಯಗೊಂಡವರಿಗೆ 50 ಸಾವಿರ ಹಾಗೂ ಅಪಘಾತದಲ್ಲಿ ಮೃತಪಟ್ಟವರಿಗೆ ತಲ್ಲಾ ಒಂದು ಲಕ್ಷ ಪರಿಹಾರ ನೀಡುತ್ತೇನೆ ಎಂದು ತಿಳಿಸಿದರು.

ಓವರ್ ಲೋಡ್ ಹಾಗೂ ಅತಿವೇಗವಾಗಿ ಬಸ್ ಚಲಾಯಿಸಿರುವುದು ಅಪಘಾತಕ್ಕೆ ಕಾರಣವಗಿದೆ.ಖಾಸಗಿ ಬಸ್ ನ ಲೈಸ್ನ್ಸ್ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಿದನೆ ಎಂದು ಶ್ರೀರಾಮುಲು ತಿಳಿಸಿದರು.


Spread the love