Spread the love

ತುಮಕೂರು: ದಲಿತ ವಿದ್ಯಾರ್ಥಿ ಪರಿಷತ್ ( DVP ) ದಿನಾಂಕ 21 – 02 – 2022 ರಂದು ವಿವಿಧ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದು ಮನವಿಯನ್ನು ಸ್ವೀಕರಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು ಮೇ 17 ರಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಅದನ್ನು ಪ್ರಸ್ತಾಪಿಸಿ ವಿವಿಧ ಪದವಿ, ಸ್ನಾತಕೋತ್ತರ 2005ರಿಂದ ಫೇಲಾದ ವಿದ್ಯಾರ್ಥಿಗಳಿಗೆ, ಅನುಮೋದನೆ ನೀಡಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ವಿವಿಧ ಸ್ನಾತಕ ಪದವಿ, ಸ್ನಾತಕ ಶಿಕ್ಷಣ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿ 2005ನೇ ಶೈಕ್ಷಣಿಕ ವರ್ಷದಿಂದ ಫೇಲಾಗಿರುವ ವಿದ್ಯಾರ್ಥಿಗಳಿಗೆ 2021-22ನೇ ಶೈಕ್ಷಣಿಕ ವರ್ಷದಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಲಾಗಿದೆ. ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿ ತುಮಕೂರು ಜಿಲ್ಲಾ DVP ಸಂಚಾಲಕರಾದ ಅಜಿತ್ ಕುಮಾರ್ ಬಿ ಓಬಯ್ಯ ಸೂಚಿಸಿದ್ದು . ಹಾಗೂ ಎಲ್ಲಾ ಸಿಂಡಿಕೇಟ್ ಸದಸ್ಯರಿಗೂ ಮತ್ತು ವಿಶ್ವವಿದ್ಯಾನಿಲಯ ಕುಲಪತಿಗಳಿಗೆ, ಕುಲಸಚಿವರಿಗೆ ಮತ್ತು ಅಧಿಕಾರಿ ವರ್ಗಕ್ಕೆ ವಿದ್ಯಾರ್ಥಿಗಳ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.


Spread the love