Spread the love

ಮಂಡ್ಯ(ಮೇ.24): ಐದು ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಡಾ. ಶಂಕರೇಗೌಡ ಅವರಿಗೆ ನಿನ್ನೆ(ಸೋಮವಾರ) ರಾತ್ರಿ ಲಘು ಹೃದಯಾಘಾತ ಸಂಭವಿಸಿದೆ. ಹೃದಯಾಘಾತಕ್ಕೊಳಗಾದ ಡಾ.ಶಂಕರೇಗೌಡರನ್ನು ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಹೃದಯದ ಮೂರು ರಕ್ತನಾಳಗಳಲ್ಲಿ ಬ್ಲಾಕ್ ಆಗಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರು ಡಾ. ಶಂಕರೇಗೌಡ ಅವರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲವೆಂದು ತಿಳಿಸಿದ್ದಾರೆ. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆಗಳಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಡಾ. ಶಂಕರೇಗೌಡ ರವರು ತಮ್ಮ ಸರಳ ವ್ಯಕ್ತಿತ್ವ ಮತ್ತು ಜನಸೇವೆಯಿಂದ ಅಪಾರ ಜನ ಸಮುದಾಯದ ಮೆಚ್ಚುಗೆಯನ್ನು ಪಡೆದಿದ್ದು ಈ ಸಂದರ್ಭದಲ್ಲಿ ಅವರು ಬೇಗ ಗುಣಮುಖರಾಗಿ ಬರಲೆಂದು ಜನರ ಪ್ರಾರ್ಥನೆಯಾಗಿದೆ.


Spread the love