Spread the love

ಇಂದು ಮದ್ಯಾಹ್ನ ದರಸಗುಪ್ಪೆ ಗ್ರಾಮದ ಬಳಿ ಅಂತ್ಯಕ್ರಿಯೆ

ವರದಿ-ಲೋಕರಕ್ಷಕ ,ಪಾಂಡವಪುರ

ಶ್ರೀರಂಗಪಟ್ಟಣ : ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರಖ್ಯಾತ ಇಡ್ಲಿ ಹೋಟೆಲ್ ಮಾಲೀಕ ತಾಲೂಕಿನ ದರಸಗುಪ್ಪೆ ಗ್ರಾಮದ ಇಡ್ಲಿ ಶಿವಪ್ಪ ಇಂದು ನಿಧನರಾಗಿದ್ದಾರೆ.
ಶಿವಪ್ಪ ಸ್ಕೂಟರ್‍ನಲ್ಲಿ ತಮ್ಮ ಸ್ವಂತ ಊರಾದ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡಬಂದು ಸ್ಕೂಟರ್‍ನಿಂದ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ನಂತರ ಮನೆಗೆ ಕರೆತರಲಾಗಿತ್ತು. ಗುರುವಾರ ಮಧ್ಯರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರ ಮಗ ಕಾರಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಅವರು ಮೃತಪಟ್ಟರು ಎನ್ನಲಾಗಿದೆ.
ಶಿವಪ್ಪ ಅವರ ಅಂತ್ಯಕ್ರಿಯೆ ದರಸಗುಪ್ಪೆ ಗ್ರಾಮದ ಬಳಿ ನಡೆಯಲಿದೆ. ಮೃತರು ಪತ್ನಿ ಮತ್ತು ಒರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಮತ್ತು ಸಾವಿರಾರು ಇಡ್ಲಿ ಪ್ರಿಯರನ್ನು ಅಗಲಿದ್ದಾರೆ.


Spread the love