ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಕಿತ ಎನ್ಜಿಒ ಚಿಲುಮೆಗೆ ಸಹಾಯ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಈಗಾಗಲೇ ಅಧಿಕಾರಿಗಳು ಪೊಲೀಸರ ವಶದಲ್ಲಿದ್ದು, ಪ್ರಕರಣ ಸಂಬಂಧ ಇನ್ನೂ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಪ್ರಕರಣ ಸಂಬಂಧ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಕೂಡ ವರ್ಗಾವಣೆಗೊಳಗಾಗಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ತುಷಾರ್ ಗಿರಿನಾಥ್ ಅವರ ವರ್ಗಾವಣೆ ಬಳಿಕ ಸ್ಥಾನಕ್ಕೆ ಬಿಬಿಎಂಪಿಯ ಮಾಜಿ ಆಯುಕ್ತರಾದ ಗೌರವ್ ಗುಪ್ತಾ ಅಥವಾ ಎನ್ ಮಂಜುನಾಥ್ ಪ್ರಸಾದ್ ಅವರನ್ನು ಮತ್ತೆ ಮುಖ್ಯಸ್ಥರನ್ನಾಗಿ ನೇಮಕ ಮಾಡಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗಿರಿನಾಥ್ ಅವರು, “ನನಗೆ ಈ ಬಗ್ಗೆ ಏನೂ ತಿಳಿದಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತಿದ್ದೇವೆಂದು ಹೇಳಿದರು.