Spread the love

ವದೆಹಲಿ: ಭಾರತ್ ಜೋಡೋ ಯಾತ್ರೆ ಸ್ಥಗಿತಕ್ಕೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಹಲವು ರ್ಯಾಲಿ, ಸಮಾವೇಶ, ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಆದರೆ, ನಾವು ಭಾರತ್ ಜೋಡೋ ಯಾತ್ರೆ ನಡೆಸಿದರೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದೆ. ಇದು ಕಾಂಗ್ರೆಸ್ ಯಾತ್ರೆ ಸ್ಥಗಿತಕ್ಕೆ ನಡೆಯುತ್ತಿರುವ ಷಡ್ಯಂತ್ರ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವರು ರಾಹುಲ್ ಗಾಂಧಿಗೆ ಕೋವಿಡ್ ಪ್ರೋಟೋಕಾಲ್ ಅನುಸರಿಸಲು ಹೇಳಿದರೆ, ಕಾಂಗ್ರೆಸ್ ನಮಗೆ ಮಾತ್ರ ಏಕೆ ಎಂದು ಪ್ರಶ್ನಿಸಿದೆ.

ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಎಲ್ಲಾ ಕೋವಿಡ್ -19 ಮಾರ್ಗಸೂಚಿಗಳನ್ನು ಅನುಸರಿಸುವಂತೆ ಅಥವಾ ರಾಷ್ಟ್ರೀಯ ಹಿತಾಸಕ್ತಿಯಿಂದ ಯಾತ್ರೆ ಸ್ಥಗಿತಗೊಳಿಸುವಂತೆ ತಿಳಿಸಿದ್ದು, ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

By admin