Spread the love

ಮೈಸೂರು: ವಸತಿ ಶಾಲೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ ಘಟನೆ ಮಹದೇವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಹಾದೇವ ನಗರದ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, ಬಸವಣ್ಣ ಎಂಬುವವರ 7 ವರ್ಷದ ಪುತ್ರ ಯುವೀನ್ ಸಾವನ್ನಪ್ಪಿದ ಬಾಲಕ ಎಂದು ಹೇಳಲಾಗಿದೆ.

 

ಕುಡಿಯುವ ನೀರಿನ ಘಟಕದಲ್ಲಿ ವಿದ್ಯುತ್ ಪ್ರವಹಿಸಿ ಅವಘಡ ಉಂಟಾಗಿದೆ. ಮೊರಾರ್ಜಿ ವಸತಿ ಶಾಲೆಯಲ್ಲಿ ಬಸವಣ್ಣ ಕುಟುಂಬ ವಾಸವಾಗಿತ್ತು. ತಂದೆಯ ಜೊತೆ ನೀರು ತರಲು ಹೋಗಿದ್ದಾಗ ಘಟನೆ ನಡೆದಿದೆ. ನಂಜನಗೂಡು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

By admin