Spread the love

ದಾವಣಗೆರೆ: ಖಾಸಗಿ ಶಾಲೆಗೆ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಿಕ್ಷಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಹರಿಹರ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು.

ರಘುನಾಥ್ ಎಂಬುವವರಿಂದ 15,000 ಲಂಚ ಪಡೆಯುತ್ತಿದ್ದಾಗ ಬಿಇಒ ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಸಿದ್ದಪ್ಪ ಅವರನ್ನು ಬಂಧಿಸಿದೆ.

ಹರಿಹರ ನಗರದ ವಿದ್ಯಾವಾಹಿನಿ ಶಾಲೆಯ ಮುಖ್ಯಸ್ಥರಾಗಿದ್ದ ರಘುನಾಥ್ ಶಾಲೆಯ ನವೀಕರಣಕ್ಕಾಗಿ ಅನುಮತಿ ಕೇಳಿದ್ದರು. ಸಿ ಬಿ ಎಸ್ ಸಿ ಶಾಲೆಯ ಪರವಾನಿಗಿ ನೀಡಲು ಬಿಇಒ ಸಿದ್ದಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ರಘುನಾಥ್ ಅವರಿಂದ ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.


Spread the love

By admin