ಬೆಂಗಳೂರು: ಕೊರೋನಾ ಕಾರಣದಿಂದ ಎರಡು ವರ್ಷಗಳಿಂದ ಹೊಸ ವರ್ಷಾಚರಣೆಗೆ ಅವಕಾಶ ಇರಲಿಲ್ಲ. ಹೀಗಾಗಿ ನಗರದ ಬಹುತೇಕ ಕಡೆ ಭರ್ಜರಿಯಾಗಿ ಹೊಸ ವರ್ಷ ಆಚರಿಸಲಾಯಿತು. 12 ಗಂಟೆಯಾಗುತ್ತಿದ್ದಂತೆ ಬಾನಂಗಳದಲ್ಲಿ ಪಟಾಕಿಯ ಬೆಳಕಿನ ಚಿತ್ತಾರ, ಕಿವಿ ಗಡಚಿಕ್ಕುವ ಸಂಗೀತದ ನಡುವೆ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಯಿತು.
ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ನಿನ್ನೆ ರಾತ್ರಿ ಲವರ್ ಮುಟ್ಟಿದ್ದಕ್ಕೆ ಮಾರಾಮಾರಿ ನಡೆದಿದೆ.
ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದೆ. ಕೆಲ ದುಷ್ಕರ್ಮಿಗಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಲವರ್ ಫುಲ್ ಗರಂ ಆಗಿದ್ದಾನೆ. ನೂಕುನುಗ್ಗಲಿನಲ್ಲಿ ತನ್ನ ಹುಡುಗಿ ಮುಟ್ಟಿದ್ದಕ್ಕೆ ದುಷ್ಕರ್ಮಿಗೆ ಆಕೆಯ ಪ್ರಿಯಕರ ಹೊಡೆದಿದ್ದಾನೆ. ಈ ವೇಳೆ ಹೊಡೆಸಿಕೊಂಡ ದುಷ್ಕರ್ಮಿ ಎಸ್ಕೇಪ್ ಆಗಿದ್ದಾನೆ. ಚರ್ಚ್ ಸ್ಟ್ರೀಟ್ನಲ್ಲಿ ಸಂಭ್ರಮಾಚರಣೆ ಮಿತಿಮೀರುತ್ತಿದೆ. ಸಂಭ್ರಮಾಚರಣೆ ಹೆಸರಿನಲ್ಲಿ ಯುವತಿಯರಿಗೆ ಕೆಲ ದುಷ್ಕರ್ಮಿಗಳು ತೊಂದರೆ ನೀಡುತ್ತಿದ್ದಾರೆ. ಇಷ್ಟೆಲ್ಲ ಆಗುತ್ತಿದ್ದರೂ ಇಲ್ಲಿ ಒಬ್ಬೇ ಒಬ್ಬರು ಪೊಲೀಸ್ ಇಲ್ಲದಿರುವುದು ವಿಪರ್ಯಾಸದ ಸಂಗತಿ.