Spread the love

ಕೆಜಿಎಫ್ ಸಿನಿಮಾದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಘಳಿಸಿರುವ ನಿರ್ದೇಶಕ ಪ್ರಶಾಂತ್ ನೀಲ್ ಬಗ್ಗೆ ಗಾಂಧಿನಗರದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಪ್ರಶಾಂತ್ ನೀಲ್ ಮುಂದಿನ ಸಿನಿಮಾದಲ್ಲಿ ಆಮೀರ್ ಖಾನ್ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಚಿತ್ರಕ್ಕಾಗಿ ಪ್ರಶಾಂತ್, ಬಾಲಿವುಡ್ ನಟನನ್ನು ತೆಲುಗು ಸಿನಿಮಾ ರಂಗಕ್ಕೆ ಕರೆತರುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಸದ್ಯ ಪ್ರಶಾಂತ್ ನೀಲ್, ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ಮುಗಿಸಿ, ರಿಲೀಸ್ ಆಗುತ್ತಿದ್ದಂತೆ ಜ್ಯೂನಿಯರ್ ಎನ್.ಟಿ.ಆರ್ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಆಮೀರ್ ಖಾನ್ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಸೆಟ್ಟೇರಲು ಇನ್ನೂ ಒಂದು ವರ್ಷವೇ ಬೇಕಾಗಬಹುದು. ಆದರೂ, ಸುದ್ದಿ ಈಗಲೇ ಹುಟ್ಟಿಕೊಂಡಿದೆ.

ಈ ಕುರಿತು ಪ್ರಶಾಂತ್ ನೀಲ್ ಮಾತನಾಡದೇ ಇದ್ದರೂ, ಅವರದ್ದೇ ಟೀಂನಿಂದ ಈ ವಿಷಯ ಬಹಿರಂಗವಾಗಿದೆ. ಜ್ಯೂನಿಯರ್ ಎನ್.ಟಿ.ಆರ್ ಜೊತೆ ಆಮೀರ್ ಖಾನ್ ನಟಿಸುತ್ತಾರಾ? ಅಥವಾ ಪ್ರಶಾಂತ್ ಈಗಾಗಲೇ ಒಂದು ಹಂತದಲ್ಲಿ ಮಾತುಕತೆ ಏನಾದರೂ ನಡೆಸಿದ್ದಾರೆ. ಈ ಯಾವುದಕ್ಕೂ ಸ್ಪಷ್ಟ ಉತ್ತರವಿಲ್ಲ.


Spread the love

By admin