ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿವಿರುದ್ಧ ಎಫ್ಐಆರ್ ದಾಖಲಾಗಿದೆ. ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕೂಡ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರಡಿ (ಆತ್ಮಹತ್ಯೆಗೆ ಪ್ರಚೋದನೆ) ಎಫ್ಐಆರ್ ದಾಖಲಾಗಿದೆ.
ಉದ್ಯಮಿ ಪ್ರದೀಪ್ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡೆತ್ನೋಟ್ನಲ್ಲಿ ಅರವಿಂದ ಲಿಂಬಾವಳಿ, ಜಿ.ರಮೇಶ್ ರೆಡ್ಡಿ, ಕೆ.ಗೋಪಿ, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖವಾಗಿದ್ದು, ಎಲ್ಲರೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ.
ಹಣಕಾಸಿನ ವಿಚಾರದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಪ್ರದೀಪ್ ಅವರ ಬ್ಯಾಂಕ್ ಸ್ಟೇಟ್ ಮೆಂಟ್ ಪರಿಶೀಲನೆ ನಡೆಸುತ್ತಿದ್ದಾರೆ. ರೆಸಾರ್ಟ್ನಲ್ಲಿ ಹೂಡಿಕೆ ಮಾಡಲು ಹಣ ಕೊಟ್ಟಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮೊದಲಿಗೆ ಇಂದು ಐವರು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಮಾಡುವ ಸಧ್ಯತೆ ಇದೆ. ಮಧ್ಯಾಹ್ನದ ವೇಳೆಗೆ ನೋಟಿಸ್ ಕೊಟ್ಟು ಕರೆಯಲು ಕಗ್ಗಲಿಪುರ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಆ ಬಳಿಕ ಅರವಿಂದ್ ಲಿಂಬಾವಳಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲು ತಯಾರಿ ನಡೆಸುತ್ತಿದ್ದಾರೆ.