Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ನೆಲ್ಯಾಡಿ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಪರಿಚಯದವನೊಬ್ಬ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್ 29 ರಂದು ಘಟನೆ ನಡೆದಿದೆ.

ತಂಗಿ ಓದುತ್ತಿರುವ ಶಾಲೆಯ ವಾರ್ಷಿಕೋತ್ಸವಕ್ಕೆ ಮನೆಯವರೊಂದಿಗೆ ವಿದ್ಯಾರ್ಥಿನಿ ತೆರಳಿದ್ದು, ಕಾರ್ಯಕ್ರಮ ಮುಗಿಸಿ ಬರುವುದಾಗಿ ಹೇಳಿದ್ದರಿಂದ ಪೋಷಕರು ಆಕೆಯನ್ನು ಬಿಟ್ಟು ಮನೆಗೆ ಬಂದಿದ್ದಾರೆ. ಪರಿಚಯದವನಾಗಿದ್ದ ಚೇತನ್ ಎಂಬಾತ ಬೈಕ್ ನಲ್ಲಿ ಮನೆಗೆ ಬಿಡುವುದಾಗಿ ವಿದ್ಯಾರ್ಥಿನಿಯನ್ನು ಸಮೀಪದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ್ದಾನೆ. ನಂತರ ಯಾರಿಗೂ ವಿಷಯ ತಿಳಿಸದಂತೆ ಬೆದರಿಕೆ ಹಾಕಿ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಪೋಷಕರು ಹುಡುಕಾಟ ನಡೆಸಿದಾಗ ಗುಡ್ಡದಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದು, ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.


Spread the love

By admin