Spread the love

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದು ಎರಡನೇ ಮದುವೆಯಾಗಲಿದ್ದಾರೆ ಎನ್ನಲಾಗುತ್ತಿದ್ದು, ಇದೀಗ ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಮೈಸೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಎಂ.ಪಿ. ಕುಮಾರಸ್ವಾಮಿಯವರು ತಮ್ಮ ಪತ್ನಿ ಸವಿತಾ ಅವರಿಂದ ವಿಚ್ಛೇದನ ಪಡೆದಿದ್ದು, ಆದರೆ ಇದನ್ನು ಪ್ರಶ್ನಿಸಿ, ಸವಿತಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

 

ಸವಿತಾ ಅವರಿಗೆ ಪತಿಯಿಂದ ವಿಚ್ಛೇದನ ಪಡೆಯುವ ಇಚ್ಛೆ ಇಲ್ಲವೆನ್ನಲಾಗಿದ್ದು, ಪತಿ ಎರಡನೇ ಮದುವೆಯಾಗುವ ಸಾಧ್ಯತೆ ಇರುವುದರಿಂದ ಮೈಸೂರಿನ ಕೌಟುಂಬಿಕ ನ್ಯಾಯಾಲಯದ ವಿಚ್ಛೇದನ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದರು.

ಹೈಕೋರ್ಟ್ ವಿಚ್ಛೇದನಕ್ಕೆ ಈಗ ತಡೆಯಾಜ್ಞೆ ನೀಡಿರುವ ಕಾರಣ ಕುಮಾರಸ್ವಾಮಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದ ಎರಡನೇ ಮದುವೆಗೆ ಬ್ರೇಕ್ ಬಿದ್ದಂತಾಗಿದೆ.


Spread the love

By admin