Spread the love

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಶನಿವಾರದಂದು ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆರಾಧ್ಯ ದೈವ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರಿಗೆ ದೇವರ ಅನುಗ್ರಹವಾಗಿದೆ.

ಹೌದು, ಹುಚ್ಚರಾಯಸ್ವಾಮಿ ದರ್ಶನ ಮಾಡಿ ಯಡಿಯೂರಪ್ಪನವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವಿಗ್ರಹದ ಎದೆಯ ಭಾಗದಿಂದ ಹೂವು ಬಿದ್ದಿದೆ.

ಈ ವಿಷಯವನ್ನು ಸ್ವತಃ ಹಂಚಿಕೊಂಡ ಯಡಿಯೂರಪ್ಪನವರು ನಮಗೆ ದೇವರು ಅನುಗ್ರಹಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಯಡಿಯೂರಪ್ಪನವರು ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರ ಚುನಾವಣಾ ರಾಜಕೀಯಕ್ಕೆ ಸಿದ್ಧತೆ ನಡೆಸಿದ್ದು ಶಿಕಾರಿಪುರದಿಂದ ಕಣಕ್ಕಿಳಿಸಲು ಬಯಸಿದ್ದಾರೆ. ಈ ಸಂದರ್ಭದಲ್ಲಿ ಶಿಕಾರಿಪುರದ ಆರಾಧ್ಯ ದೈವ ಹುಚ್ಚರಾಯಸ್ವಾಮಿ ಹೂವು ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


Spread the love

By admin