Spread the love

ಬೆಂಗಳೂರು : ಮಂಗಳವಾರ ನಾಗವಾರದಲ್ಲಿ ನಡೆದ ಮೆಟ್ರೋ ಪಿಲ್ಲರ್​ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಾರ್ಜುನ ಕನ್ಸ್‌ಟ್ರಕ್ಷನ್ ಕಂಪನಿ ಸೇರಿದಂತೆ ಎಂಟು ಮಂದಿ ವಿರುದ್ಧ ಎಫ್​​ಐಆರ್ ದಾಖಲಿಸಲಾಗಿದೆ.

ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಘಟನೆ ಸಂಬಂಧ ನಿನ್ನೆ ರಾತ್ರಿ ಎಫ್​​ಐಆರ್ ನಲ್ಲಿ ಯಾರ ಹೆಸರು ಇರಲಿಲ್ಲ. ಯಾರ ಹೆಸರೂ ಅವರಿಗೆ ಗೊತ್ತಿರಲಿಲ್ಲ. ಇದೀಗ ಅವರು ಹೆಸರು ಸೂಚಿಸಿ ಪೊಲೀಸರು ಎಫ್​​ಐಆರ್ ಮಾಡಿದ್ದಾರೆ ಎಂದು ಹೇಳಿದರು.

ಈಗ ನಾಗಾರ್ಜುನ ಕನ್ಸ್‌ಟ್ರಕ್ಷನ್ ಕಂಪನಿಯ ಪೂಜಾ ಜೆಇ, ಚೈತನ್ಯ, ಮೆಥಾಯಿ ಕಂಪನಿಯ ವಿಕಾಸ್ ಸಿಂಗ್ ಪಿಎಂ, ಸೂಪರ್ ವೈಸರ್ ಲಕ್ಷ್ಮಿ ಪತಿ, ಬಿಎಂಆರ್​ಸಿಎಲ್​ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಬಿಎಂಆರ್​ಸಿಎಲ್​ ಎಂಜಿನಿಯರ್ ಮಹೇಶ್ ಬೆಂಡೆಕೇರಿ ಇವರ ಮೇಲೆ ದೂರು ದಾಖಲಾಗಿದ್ದು, ಕ್ರಮ ಆಗಲಿದೆ ಎಂದರು. ಇದೇ ವೇಳೆ ತಾಯಿ ಮಗುವಿನ ಸಾವಿನ ಕುರಿತು ವಿಷಾದಿಸಿದ ಅವರು, ನಿರ್ಲಕ್ಷ್ಯದಿಂದ ಪ್ರಾಣ ಹಾನಿಯಾಗಿದೆ. ಈ ರೀತಿ ಆಗಬಾರದು, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.


Spread the love

By admin