ಬೆಂಗಳೂರು: ದಕ್ಷಿಣ ಭಾರತದ ಹೆಬ್ಬಾಗಿಲಾಗಿರುವ ಕರ್ನಾಟಕದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎಂದು ಶತಾಯ ಗತಾಯ ಪ್ರಯತ್ನ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೋಡಿ ರಾಜ್ಯದಲ್ಲಿ ಮೋಡಿ ಮಾಡಲು ಸಜ್ಜಾಗುತ್ತಿದ್ದಾರೆ.
ಹಳೆ ಮೈಸೂರಿನತ್ತ ಅಮಿತ್ ಶಾ, ಉತ್ತರ ಕರ್ನಾಟಕದತ್ತ ಮೋದಿ ಚಿತ್ತ ಹರಿಸಿದ್ದು, ಕರುನಾಡಿನಲ್ಲಿ ಪೂರ್ಣ ಬಹುಮತಕ್ಕೆ ಬೇಕಾದ ಸಂಖ್ಯೆ ತಲುಪಲು ತಂತ್ರ ಹೆಣೆಯುತ್ತಿದೆ. ಹೀಗಾಗಿ ರಾಜ್ಯಕ್ಕೆ ಹೈಕಮಾಂಡ್ನ ಜೋಡೆತ್ತುಗಳು ಸರಣಿ ಪ್ರವಾಸದ ಮೂಲಕ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಲು ಮುಂದಾಗಿವೆ.