Spread the love

ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದ ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಪಿಡಿಒ ಎ.ಟಿ. ನಾಗರಾಜ್ ದಾವಣಗೆರೆ ನ್ಯಾಯಾಲಯಕ್ಕೆ ಗುರುವಾರ ಶರಣಾಗಿದ್ದಾನೆ. ಎ.ಟಿ. ನಾಗರಾಜ್ ಮತ್ತು ಅವರ ಬೆಂಬಲಿಗರು ಸೇರಿಕೊಂಡು ಹೊಸಕೆರೆ ಗ್ರಾಮದ ಡಾಬಾ ಒಂದರಲ್ಲಿ ಊಟ ಮಾಡುತ್ತಿದ್ದ ರಾಮಕೃಷ್ಣನನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದರು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಕೃಷ್ಣ ಅವರ ತಂದೆ ಪ್ರಕಾಶ್ ಪಿಡಿಒ ಸೇರಿದಂತೆ 11 ಮಂದಿ ವಿರುದ್ಧ ಜಗಳೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಇನ್ನೂ ಇಬ್ಬರು ಆರೋಪಿಗಳು ಜಗಳೂರು ಪೊಲೀಸರಿಗೆ ಶರಣಾಗಿದ್ದರು . ತಲೆ ಮರೆಸಿಕೊಂಡಿದ್ದ ಎ1 ಆರೋಪಿ ಪಿಡಿಒ ನಾಗರಾಜ್ ಗುರುವಾರ ನ್ಯಾಯಾಲಯಕ್ಕೆ ಶರಣಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love

By admin