Spread the love

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆಯ ಕಿಂಗ್ ಪಿನ್ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ ಪೊಲೀಸರು ನಿನ್ನೆ ರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ.

ಅಹಮದಾಬಾದ್ ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಕಾಶ್ ಏರ್ ವಿಮಾನದಲ್ಲಿ ಸ್ಯಾಂಟ್ರೋ ರವಿಯನ್ನು ಕರೆ ತಂದ ಪೊಲೀಸರು ವಿಮಾನ ನಿಲ್ದಾಣದ ವಿಐಪಿ ಭದ್ರತಾ ಪಡೆಯ ಗೇಟ್ ನಿಂದ ಮಾಧ್ಯಮಗಳ ಕಣ್ಣು ತಪ್ಪಿಸಿ ಕರೆದುಕೊಂಡು ಹೋಗಿದ್ದಾರೆ.

 

ರಾತ್ರಿ 11:30 ಕ್ಕೆ ಆಕಾಶ್ ಏರ್ ವಿಮಾನದಲ್ಲಿ ಸ್ಯಾಂಟ್ರೋ ರವಿಯನ್ನು ಕರೆತರಲಾಗಿದ್ದು, ರಹಸ್ಯ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. ಇಂದು ನ್ಯಾಯಾಧೀಶರ ಎದುರು ಹಾಜರುಪಡಿಸಿ ವಿಚಾರಣೆಗೆ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.


Spread the love

By admin