Spread the love

ವಿವಾಹ ನಿಶ್ಚಿತಾರ್ಥವಾಗಿ ತಿಂಗಳೊಳಗೆ ಹಸೆಮಣೆ ಏರಬೇಕಿದ್ದ ಯುವಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ಶುಕ್ರವಾರದಂದು ನಡೆದಿದೆ.

ತಾಲೂಕಿನ ನೆಲವಾಗಿಲು ಗ್ರಾಮದ ನಿವಾಸಿ 28 ವರ್ಷದ ಅನಿಲ್ ಮೃತಪಟ್ಟ ಯುವಕನಾಗಿದ್ದು, ಈತನಿಗೆ ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ.

 

ಕೂಡಲೇ ಆತನನ್ನು ತುರ್ತು ಚಿಕಿತ್ಸೆಗಾಗಿ ಶಿಕಾರಿಪುರಕ್ಕೆ ಕರೆತರುವಾಗ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.


Spread the love

By admin