Spread the love

ಹುಬ್ಬಳ್ಳಿ: ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಮಂಡನೆಗೆ ಎಲ್ಲಾ ತಯಾರಿ ನಡೆಸಲಾಗಿದ್ದು, ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

 

ಅತ್ಯುತ್ತಮ ಬಜೆಟ್ ಮಂಡನೆಗೆ ತಯಾರಿ ನಡೆಸಿದ್ದು, ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಈ ಬಾರಿ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯ ಉಣಕಲ್ಲ ಸಿದ್ದಪಜ್ಜನ ಮಠಕ್ಕೆ ಭೇಟಿ ನೀಡಿದ ಸಿಎಂ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಚಿಕ್ಕಂದಿನಿಂದಲೂ ಸಿದ್ದಪ್ಪಜ್ಜನ ಮಠಕ್ಕೆ ಬಂದು ಆಶೀರ್ವಾದ ಪಡೆಯುತ್ತಿದ್ದೇನೆ. ನಾಡಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.


Spread the love

By admin