Spread the love

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ-ಎನ್ ಐ ಎ ಬಹುಮಾನ ಘೋಷಣೆ ಮಾಡಿದೆ.ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ ಐ ಎ ಮೂವರು ಆರೋಪಿಗಳನ್ನು ಬಂಧಿಸಿದೆ.

ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ನಡೆಸಿದ್ದು, ಆರೋಪಿಗಳಾದ ಷರೀಫ್ ಹಾಗೂ ಮಸೂದ್ ಕೆ.ಎ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

ಆರೋಪಿ ಷರೀಫ್ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತ್ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಅವರ ಪುತ್ರ. ಇನ್ನು ಮಸೂದ್ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ಅಬೂಬಕ್ಕರ್ ಅವರ ಮಗ ಎಂದು ತಿಳಿದುಬಂದಿದೆ. ಆರೋಪಿಗಳ ಸುಳಿವು ಸಿಕ್ಕಲ್ಲಿ ಬೆಂಗಳೂರಿನ ದಮ್ಮಲೂರು ಎನ್ ಐ ಎ ಎಸ್ ಪಿ ಗೆ ಮಾಹಿತಿ ನೀಡುವಂತೆ ತಿಳಿಸಿದೆ.


Spread the love

By admin