Spread the love

ರಾಮನಗರ: ಮಂಚನಬೆಲೆ ಜಲಾಶಯ ಆವರಣಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಡ್ಯಾಂ ನಲ್ಲಿ ಘಟನೆ ನಡೆದಿದೆ.

ಜಲಾಶಯ ವೀಕ್ಷಿಸಲು ಐವರು ಯುವಕರು ಆಟೋದಲ್ಲಿ ಬಂದಿದ್ದರು. ಸೆಕ್ಯೂರಿಟಿ ಗಾರ್ಡ್ ಡ್ಯಾಂ ಆವರಣಕ್ಕೆ ತೆರಳಲು ಅವಕಾಶ ನೀಡಿರಲಿಲ್ಲ. ಕೋಪಗೊಂಡ ಯುವಕರು ಸೆಕ್ಯೂರಿಟಿ ಗಾರ್ಡ್ ನರಸಿಂಹಮೂರ್ತಿ ಮೇಲೆ ಹಲ್ಲೆ ಮಾಡಿದ್ದಾರೆ.

ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಯುವಕರು ಹಲ್ಲೆ ನಡೆಸಿದ್ದಾರೆ. ಸ್ಥಳೀಯರು ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ನಂತರ ಇಬ್ಬರು ಯುವಕರು ಪರಾರಿಯಾಗಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

By admin