Spread the love

ಮಂಗಳೂರು: ಪಕ್ಷದಲ್ಲಿ ಒಳ ಜಗಳವಿಲ್ಲ, ಆದರೆ ಭಿನ್ನಾಭಿಪ್ರಾಯವಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ.

ಪ್ರಣಾಳಿಕೆ ಬಗ್ಗೆ ಸಂಘ-ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದೇವೆ, ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದರು.

ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯ ಹಾಳು ಮಾಡಿದೆ. ಕೋಮು ಸೌಹಾರ್ದತೆ ವಿಚಾರ ಕೂಡ ನಮ್ಮ ಪ್ರಣಾಳಿಕೆಯಲ್ಲಿದೆ. ವಿದ್ಯಾರ್ಥಿ ವೇತನವನ್ನು ಬಿಜೆಪಿ ಸರ್ಕಾರ ನಿಲ್ಲಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

By admin