Spread the love

ಸ್ತ್ರಚಿಕಿತ್ಸೆ ವೇಳೆ ಪತ್ನಿಯ ಎರಡೂ ಕಿಡ್ನಿಗಳು ಕಳುವಾದ ಬಳಿಕ ಆಕೆಯನ್ನ ಪತಿ ಮೂರು ಮಕ್ಕಳೊಂದಿಗೆ ಆಸ್ಪತ್ರೆಯಲ್ಲೇ ಬಿಟ್ಟುಹೋಗಿರುವ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ. ಸುನೀತಾ ಎಂದು ಗುರುತಿಸಲಾದ ಮಹಿಳೆ ಈಗ ತನ್ನ ಮೂವರು ಮಕ್ಕಳೊಂದಿಗೆ ಆಸ್ಪತ್ರೆಯಲ್ಲೇ ಉಳಿದಿದ್ದಾರೆ.

ಅವರಿಗೆ ಯಾವುದೇ ಆದಾಯವಿಲ್ಲದೇ ಆಸ್ಪತ್ರೆಯ ಖರ್ಚು ಭರಿಸಲಾಗದೇ ಸಂಕಷ್ಟದಲ್ಲಿದ್ದಾರೆ.

ಸುನೀತಾ ಗರ್ಭಾಶಯದ ಸೋಂಕಿನಿಂದಾಗಿ ಮುಜಾಫರ್‌ಪುರದ ನರ್ಸಿಂಗ್ ಹೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರ ಮೂತ್ರಪಿಂಡಗಳನ್ನು ಕದ್ದಿದ್ದಾರೆ.

ದಿನಗೂಲಿ ಕೆಲಸ ಮಾಡುತ್ತಿದ್ದ ಸುನೀತಾ ತನ್ನ ಮೂವರು ಮಕ್ಕಳನ್ನು ಸಾಕುತ್ತಿದ್ದರು. ಈಗ ಕೆಲಸಕ್ಕೆ ಹೋಗಲಾಗದೇ ಆಸ್ಪತ್ರೆಗೆ ದಾಖಲಾಗಿರುವ ಆಕೆ ಮಕ್ಕಳ ಯೋಗಕ್ಷೇಮದ ಬಗ್ಗೆ ಚಿಂತಿತರಾಗಿದ್ದಾರೆ. ಕೆಲ ದಿನಗಳ ಹಿಂದಿನವರೆಗೂ ಸುನೀತಾ ಅವರ ಪತಿ ಅಕ್ಲು ರಾಮ್ ಆಕೆಯ ಜೊತೆಗಿದ್ದರು. ಆತನೂ ಆಕೆಗೆ ಕಿಡ್ನಿ ನೀಡಲು ಸಿದ್ಧನಾಗಿದ್ದ. ಆದರೆ ಆತನ ಕಿಡ್ನಿ ಹೊಂದಿಕೆಯಾಗಲಿಲ್ಲ. ಸುನೀತಾ ಅವರೊಂದಿಗೆ ಯಾವುದೋ ವಿಷಯಕ್ಕೆ ಜಗಳವಾಡಿದ ಪತಿ ಇದೀಗ ಮೂವರು ಮಕ್ಕಳನ್ನು ಆಕೆಯ ಬಳಿ ಬಿಟ್ಟು ಓಡಿ ಹೋಗಿದ್ದಾನೆ.


Spread the love

By admin