Spread the love

ಬೆಂಗಳೂರು: ಇದುವರೆಗೆ ರಾಜ್ಯಮಟ್ಟದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ನಡೆಸುತ್ತಿದ್ದ ಎಸ್‌ಎಸ್‌ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು 2022 -23ನೇ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಡೆಸಲು ತೀರ್ಮಾನಿಸಲಾಗಿದೆ.

 

ಫೆಬ್ರವರಿಯಲ್ಲಿ ನಡೆಯಲಿರುವ ಪೂರ್ವ ಸಿದ್ಧತಾ ಪರೀಕ್ಷೆಗೆ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿಯಿಂದ ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿ ಲಾಗಿನ್ ಗೆ ಪ್ರಶ್ನೆ ಪತ್ರಿಕೆಯನ್ನು ಅಪ್ಲೋಡ್ ಮಾಡಲಾಗುವುದು. ಬಿಇಒ ಹಂತದಲ್ಲಿಯೇ ಈ ಪ್ರಶ್ನೆ ಪತ್ರಿಕೆ ಅನುಸರಿಸಿ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿ, ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ರಾಂಗ್ ರೂಂನಲ್ಲಿ ಗೌಪ್ಯವಾಗಿ, ಸುರಕ್ಷಿತವಾಗಿಡಬೇಕು. ಆಯಾ ವಿಷಯ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಿಸಬೇಕು ಎಂದು ಹೇಳಲಾಗಿದೆ.


Spread the love

By admin