Spread the love

ಕೋಲಾರ: ಕೋಲಾರ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕೋಲಾರ ನಗರದ ಖಾಸಗಿ ಹೋಟೆಲ್ ನಲ್ಲಿ ಚಿಕ್ಕರಾಯಪ್ಪ ನೇತೃತ್ವದಲ್ಲಿ ಕುರುಬ ಸಮುದಾಯದ ಮುಖಂಡರ ಸಭೆ ನಡೆಸಲಾಗಿದೆ.

ಸಿದ್ದರಾಮಯ್ಯ ಅವರನ್ನು ಕರೆಸಿ ಬೃಹತ್ ಸಭೆ ನಡೆಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

ಸಿದ್ದರಾಮಯ್ಯ ಪರವಾಗಿ ಸಮುದಾಯ ಒಗ್ಗೂಡಿಸಲು ಸಮಾಜದ ಮುಖಂಡರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಸಭೆ ನಡೆಸಿರುವ ಮುಖಂಡರು ಚುನಾವಣೆಯಲ್ಲಿ ಸಿದ್ಧರಾಮಯ್ಯ ಪರವಾಗಿ ಸಮಾಜವನ್ನು ಒಟ್ಟುಗೂಡಿಸಲು ತೀರ್ಮಾನಿಸಿದ್ದಾರೆ.


Spread the love

By admin