Spread the love

ಳ್ಳಾರಿ: ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುತ್ತಿಗನೂರು ಸಮೀಪ ನಡೆದಿದೆ.

ಮಣಿಕಂಠ(14), ಹರ್ಷವರ್ಧನ(9) ಮೃತಪಟ್ಟವರು ಎಂದು ಹೇಳಲಾಗಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಸಮೀಪ ಘಟನೆ ನಡೆದಿದೆ.

ಅಂಬಾದೇವಿ ಜಾತ್ರೆಗೆ ಬಂದಿದ್ದ ಚೌಡಕಿ ಕುಟುಂಬದ ಮಕ್ಕಳು ಮೃತಪಟ್ಟಿದ್ದಾರೆ.

ಒಂದೇ ಕುಟುಂಬದ ಮೂವರು ಮಕ್ಕಳು ಬಹಿರ್ದೆಸೆಗೆ ತೆರಳಿದ್ದರು. ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೊಬ್ಬ ಬಾಲಕ ಸುರಕ್ಷಿತವಾಗಿದ್ದಾನೆ. ಸ್ಥಳಕ್ಕೆ ಕುರುಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin