Spread the love

ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಭದ್ರತೆಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಮಂಗಳೂರು ಭಾಗದಲ್ಲಿ ಅಮಿತ್ ಶಾ ಪ್ರಚಾರ ಮಾಡಬೇಕಿತ್ತು ಪುತ್ತೂರು ರೋಡ್ ಶೋಗೆ ಕಾನೂನು ಸುವ್ಯವಸ್ಥೆಯ ಸಮಸ್ಯೆ ಎದುರಾದ ಕಾರಣಕ್ಕಾಗಿ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ.

ಇದು ರಾಜ್ಯಕ್ಕೆ ದೊಡ್ಡ ಅವಮಾನ? ರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೆ ಭದ್ರತೆಯಿಲ್ಲ ಎಂದು ಕೆಂಡಾಮಂಡಲರಾಗಿದ್ದಾರೆ. ಅಷ್ಟೇ ಅಲ್ಲದೇ ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಾರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ಕುರಿತು ಮಾತನಾಡಿದ ಅವರು, ಅಲ್ಲಿನ ಕಾರ್ಯಕರ್ತರು ಅಧ್ಯಕ್ಷರ ಗಾಡಿಯನ್ನೇ ಎತ್ತಿ ಬಿಸಾಡಿದ್ರು. ಬಡವರ ಮಕ್ಕಳನ್ನು ಇಂತಹ ಕೃತ್ಯಗಳಿಗೆ ಇಳಿಸಿ ಬಲಿ ತೆಗೆದುಕೊಳ್ತಿದ್ದಾರೆ. ಅಂದ್ರೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು. ಕಾನೂನು ಸುವ್ಯವಸ್ಥೆ ತೊಡಕು ಎದುರಾದರೆ ಇನ್ನು ಸಾಮಾನ್ಯರ ಕಥೆ ಏನು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.


Spread the love