Spread the love

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಫೆ.ಬ್ರವರಿ 8ರಂದು ಕಾಲೇಜು ಫೆಸ್ಟ್ ವೇಳೆ ನಡೆದ ಕಿರು ನಾಟಕ ಪ್ರದರ್ಶನದಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ, ಜಾತಿ ನಿಂಧನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಸಿದ್ದಾಪುರ ಪೊಲೀಸರು ಇದೀಗ 7 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಶಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು. ಎಲ್ಲರೂ ಬಿಬಿಎಂ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.


Spread the love

By admin