Spread the love

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಫೆಬ್ರವರಿ 20ರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶರದಾಂಬಾ ಮಠಕ್ಕೆ ಜೆ.ಪಿ ನಡ್ಡಾ ಆಗಮಿಸಲಿದ್ದಾರೆ.

ಶೃಂಗೇರಿ ಶಾರದಾಂಬೆಯ ದರ್ಶನದ ಬಳಿಕ ಜಗದ್ಗುರುಗಳ ಭೇಟಿ ಮಾಡಲಿದ್ದಾರೆ.

ಜಗದ್ಗುರುಗಳ ಭೇಟಿಗಾಗಿ 20 ನಿಮಿಷಗಳ ಕಾಲ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ್ದವರ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬೆನ್ನಲ್ಲೇ ಜೆ.ಪಿ.ನಡ್ಡಾ ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.


Spread the love

By admin