Spread the love

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ನಂತರದಲ್ಲಿ  ರೇಷನ್‌ (Ration Card Holder) ಕಾರ್ಡ್‌ ಹೊಂದಿರುವವರಿಗೆ ರಾಜ್ಯ ಸರ್ಕಾರವು ಇದೀಗ ಸಿಹಿಸುದ್ದಿಯೊಂದನ್ನು ನೀಡಿದೆ.

ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡ್‌ಗಳ ಬೇಡಿಕೆ ಹೆಚ್ಚಾಗಿ ಕಂಡುಬಂದಿತ್ತು. ಬೇಡಿಕೆ ನಿರೀಕ್ಷೆಗೂ ಮೀರಿ ಹೆಚ್ಚಾಗಿದ್ದು ಹಾಗೂ ಸರ್ವರ್‌ ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದಾಗಿ

ನೂತನ ರೇಷನ್‌ ಕಾರ್ಡ್‌ ವಿತರಣೆ, ಸೇರ್ಪಡೆ ಸೇರಿದಂತೆ ವಿವಿಧ ಕೆಲಸಗಳನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ತಡೆ ಹಿಡಿದಿತ್ತು.

ಇದೀಗ ರಾಜ್ಯ ಸರ್ಕಾರವು ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಈ ಹಿಂದೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ

ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ  ಇದೇ ಸೆಪ್ಟೆಂಬರ್ 14ವರೆಗೂ ವಿಸ್ತರಣೆ ಮಾಡಿರುವುದಾಗಿ ಆದೇಶ ಮಾಡಿದೆ. ಹೀಗಾಗಿ, ಇಂದು ಈ ಅವಕಾಶ ಲಭ್ಯವಿರಲಿದೆ.


Spread the love