Spread the love

ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅತ್ಯಂತ ತೀವ್ರ ಕುತೂಹಲ ಕೆರಳಿಸಿದೆ. ಉಭಯ ತಂಡಗಳು ಅಕ್ಟೋಬರ್‌ 14 ರಂದು ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಲಿವೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯದ ವೇಳೆ ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ತಡೆಯಲು ಅಹಮದಾಬಾದ್‌ ನಗರದಲ್ಲಿ ಒಟ್ಟು 11,000 ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಅಹಮಾದಾಬಾದ್‌ ನಗರ ಪೊಲೀಸ್ ಆಯುಕ್ತ ಜಿಎಸ್‌ ಮಲಿಕ್‌ ತಿಳಿಸಿದ್ದಾರೆ.

ಕಳೆದ 20 ವರ್ಷಗಳಿಂದ ಕ್ರಿಕೆಟ್‌ ಪಂದ್ಯಗಳು ನಡೆಯುವ ವೇಳೆ ಅಹಮದಾಬಾದ್‌ನಲ್ಲಿ ಯಾವುದೇ ಕೋಮು ಗಲಭೆಗಳು ನಡೆದಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಗುಜರಾತ್‌ ಪೊಲೀಸ್‌, ಆರ್‌ಎಎಫ್‌ ಹಾಗೂ ಗೃಹ ರಕ್ಷಣಾ ಸಿಬ್ಬಂದಿ ಸೇರಿ ಒಟ್ಟು 11,000 ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

ಭಾರತದಲ್ಲಿ ಏಕದಿನ ವಿಶ್ವಕಪ್‌ ಟೂರ್ನಿ ನಡೆಯುತ್ತಿದ್ದು, ಅದರಂತೆ ಅಹಮಾದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿಯೂ ಕೂಡ ಕೆಲ ಪ್ರಮುಖ ಪಂದ್ಯಗಳು ನಡೆಯುತ್ತಿವೆ. ಅದರಂತೆ ಮುಂದಿನ ಶನಿವಾರ ಇಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಗೃಹ ಸಚಿವ ಹರ್ಷ್‌ ಸಾಂಘವಿ, ರಾಜ್ಯ ಪೊಲೀಸ್‌ ಆಯುಕ್ತ ವಿಕಾಸ್‌ ಸಹಾಯ್‌, ನಗರ ಪೊಲೀಸ್‌ ಆಯುಕ್ತ ಜಿಎಸ್‌ ಮಲಿಕ್‌ ಸೇರಿದಂತೆ ಇತರೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು

 


Spread the love