Spread the love

ಬೆಂಗಳೂರು: ಬೆಂಗಳೂರಿನಲ್ಲಿ ತ್ರಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಪಿ ಅಗ್ರಹಾರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 36 ವರ್ಷದ ಅಮ್ಜದ್ ಖಾನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.  ಆರೋಪಿಯು, ಆಟೋ ರಿಕ್ಷಾದ ಹಾಗೂ ನಮ್ಮ ಠಾಣಾ ಸರಹದ್ದಿನಲ್ಲಿ ಎರಡು ಪ್ಯಾಸೆಂಜರ್ ಆಟೋಗಳ ಹ್ಯಾಂಡಲ್ ಲಾಕನ್ನು ಮುರಿದು ವಾಹನ ಕದ್ದು ಎಸ್ಕೇಪ್ ಆಗುತ್ತಿದ್ದ.

ಈ ಸಂಬಂಧ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇನ್ನೂ ಆರೋಪಿಯಿಂದ ಸುಮಾರು 4,10,000/- ರೂ ಮೌಲ್ಯದ ನಾಲ್ಕು ಪ್ಯಾಸೆಂಜರ್ ಆಟೋವನ್ನು ಪೊಲೀಸರು ಜಪ್ತಿ ಮಾಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

By admin