Spread the love

ಣ್ಣಪುಟ್ಟ ಸಂಚಾರ ನಿಯಮ ಉಲ್ಲಂಘನೆಗೂ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತಿದ್ದು, ಇದನ್ನು ಕಟ್ಟಲು ಸಾಧ್ಯವಾಗದ ಬಡ-ಮಧ್ಯಮ ವರ್ಗದ ವಾಹನ ಸವಾರರಿಗೆ ಅಗತ್ಯ ದಾಖಲೆಗಳನ್ನು ನೀಡದಿರಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಅಮಾನವೀಯ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಹೇಳಿದರು.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಜಗದೀಶ್‌ ವಿ ಸದಂ, “ದಂಡ ಕಟ್ಟಲು ಸಾಧ್ಯವಾಗದೇ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ವಿಮಾ ಪಾಲಿಸಿ ನವೀಕರಣ,

ರಸ್ತೆ ತೆರಿಗೆ ಪಾವತಿ ರಸೀದಿ ಹಾಗೂ ವಾಹನ ಕ್ಷಮತೆ ಪ್ರಮಾಣಪತ್ರ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಾಹನ ಸವಾರರಿಗೆ ಗುಂಡಿಗಳಿಲ್ಲದ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಲೂ ಸಾಧ್ಯವಾಗದ ರಾಜ್ಯ ಸರ್ಕಾರವು ದಂಡ ವಸೂಲಿಗೆ ಮಾತ್ರ ಕಠಿಣ ನಿಲುವು ತೆಗೆದುಕೊಳ್ಳುವುದು ಸರಿಯಲ್ಲ. ಬೆಂಗಳೂರಿನ ಬಹುತೇಕ ವಾಹನ ಸವಾರರ ಮೇಲೆ ಕನಿಷ್ಠ 2,000 ರೂಪಾಯಿಯಿಂದ 40,000 ರೂಪಾಯಿ ತನಕ ದಂಡವಿದೆ. ಇದರಲ್ಲಿ ಹೆಚ್ಚಿನವರು ಬಡ ಹಾಗೂ ಮಧ್ಯಮ ವರ್ಗದವರಾಗಿದ್ದು, ಸರ್ಕಾರದ ನೂತನ ನಿರ್ಧಾರದಿಂದ ಇವರಿಗೆ ತೀವ್ರ ತೊಂದರೆಯಾಗಲಿದೆ” ಎಂದು ಹೇಳಿದರು.

“ಬೆಂಗಳೂರಿನಲ್ಲಿ ಸಂಚಾರದಟ್ಟಣೆಯು ದೊಡ್ಡ ಸಮಸ್ಯೆಯಾಗಿದ್ದು, ಇದರಿಂದ ವಾಹನಸವಾರರು ಪ್ರತಿದಿನ ಹೈರಾಣಾಗುತ್ತಿದ್ದಾರೆ. ಅವರ ಅಮೂಲ್ಯ ಸಮಯವು ರಸ್ತೆಯಲ್ಲಿ ವ್ಯರ್ಥವಾಗುತ್ತಿದೆ. ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸಂಚಾರದಟ್ಟಣೆ ನಿರ್ವಹಣೆ ಮಾಡಲು ಬಳಸಿಕೊಳ್ಳುವ ಬದಲು ಕೇವಲ ದಂಡ ವಸೂಲಿ ಮಾಡಲು ಬಳಸಿಕೊಳ್ಳಲಾಗುತ್ತಿದೆ. ವಾಹನ ಸವಾರರನ್ನು ಲೂಟಿ ಮಾಡುವುದೇ ಪೊಲೀಸ್‌ ಇಲಾಖೆಯ ಆದ್ಯತೆಯ ವಿಷಯವಾಗಿದೆ” ಎಂದು ಜಗದೀಶ್‌ ವಿ ಸದಂ ಆಕ್ರೋಶ ವ್ಯಕ್ತಪಡಿಸಿದರು.


Spread the love

By admin