Spread the love

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಕತೀಜಾ ಕೂಬ್ರ ಶವ ಪತ್ತೆಯಾಗಿರುವ ಘಟನೆ ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ನಡೆದಿದೆ. ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಮೃತ ಕತೀಜಾ ಕುಟುಂಬಸ್ಥರು ಸುದ್ದಗುಂಟೆಪಾಳ್ಯ ಪೊಲೀಸ್​​​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತಿ ಮಹೆಬೂಬ್ ಪರೀಷ್ ಪತ್ನಿಯನ್ನ ಹೊಡದು ನೇಣು ಹಾಕಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದು ದೂರು ಆಧರಿಸಿ ಪತಿ ಮೆಹಬೂಬ್​ ಪರೀಷ್, ಮಾವ,

ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಮಾತನಾಡಿದ ಮೃತ ಕತೀಜಾ ತಂದೆ ಕಣ್ಣೀರು ಹಾಕಿದ್ದಾರೆ. ಮದುವೆಯಾದಾಗಿನಿಂದ ಮಗಳ ಜೊತೆ ಯಾವಾಗಲೂ ಜಗಳ ಆಗುತ್ತಿತ್ತು. ನನ್ನ ಅಳಿಯನಿಗೆ ಇನ್ನೋರ್ವ ಮಹಿಳೆಯ ಜೊತೆ ಸಂಬಂಧವಿದೆ. ಹಾಗಾಗಿ ನನ್ನ ಮಗಳನ್ನ ಅಳಿಯನೇ ಸಾಯಿಸಿದ್ದಾನೆ. ನನ್ನ ಮಗಳ ಗಂಡನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ ಅವರಿಗೆ ಶಿಕ್ಷೆಯಾಗಬೇಕು ಎಂದು ಮೃತ ಕತೀಜಾ ತಂದೆ ಜಾವಿದ್​ ವುಲ್ಲಾಖಾನ್ ಕಣ್ಣೀರು ಹಾಕಿದ್ದಾರೆ.


Spread the love

By admin