ಗಡಿ ವಲಯದಲ್ಲಿ ಸ್ಥಿರತೆ ಕಾಪಾಡಲು ಚೀನಾ ಮತ್ತು ಭಾರತ ಎರಡೂ ಬದ್ಧವಾಗಿವೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಭಾನುವಾರ ಹೇಳಿದ್ದಾರೆ.
ಚೀನಾ ಮತ್ತು ಭಾರತ ದೇಶಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಸಂವಹನವನ್ನು ನಿರ್ವಹಿಸಿವೆ. ಗಡಿ ಪ್ರದೇಶಗಳಲ್ಲಿ ಸ್ಥಿರತೆ ಕಾಪಾಡಲು ಉಭಯ ದೇಶಗಳು ಬದ್ಧವಾಗಿವೆ. ಚೀನಾ-ಭಾರತ ಸಂಬಂಧಗಳ ಸ್ಥಿರ ಮತ್ತು ಉತ್ತಮ ಬೆಳವಣಿಗೆಯ ದಿಕ್ಕಿನಲ್ಲಿ ನಾವು ಭಾರತದೊಂದಿಗೆ ಕೆಲಸ ಮಾಡಲು ಸಿದ್ಧರಾಗಿದ್ದೇವೆ ವಾಂಗ್ ಯಿ ಹೇಳಿದರು.
ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ.
ಘರ್ಷಣೆಯ ನಂತರ ಭಾರತ ಮತ್ತು ಚೀನಾ ಡಿಸೆಂಬರ್ 20 ರಂದು ಚೀನಾ ಕಡೆಯ ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ 17 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯನ್ನು ನಡೆಸಿವೆ ಮತ್ತು ಪಶ್ಚಿಮ ವಲಯ ಪ್ರದೇಶದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.