ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯೊಬ್ಬರನ್ನು ಒಂದು ತಿಂಗಳ ಕಾಲ ಗೃಹ ಬಂಧನದಲ್ಲಿಟ್ಟು, ಎರಡು ಪ್ರದೇಶಗಳಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ದಲಿತ ಸಮುದಾಯಗಳ ಮುಖಂಡರು ಆರೋಪಿಸಿದ್ದಾರೆ.
ತಿರುಪತಿ ಜಿಲ್ಲೆಯ ಚಂದ್ರಗಿರಿಯಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಮಂಗಳವಾರ ಮಾಧ್ಯಮಗೋಷ್ಟಿ ನಡೆಸಲಾಯಿತು. ತಿರುಪತಿ ಅಂಬೇಡ್ಕರ್ ಭವನದ ಅಧ್ಯಕ್ಷ ದುಗ್ಗಾಣಿ ಜಯರಾಂ, ದಲಿತ ಸಂಯುಕ್ತ ಒಕ್ಕೂಟದ ಮುಖಂಡರಾದ ಕಾತಿ ಹರಿ ಮತ್ತಿತರರು ಈ ಕುರಿತು ಮಾತನಾಡಿದರು.
ಈ ವೇಳೆ ಅವರು ನೀಡಿದ ವಿವರಗಳ ಪ್ರಕಾರ- ಚಿತ್ತೂರು ಜಿಲ್ಲೆ ವೆದುರುಕುಪ್ಪಂ ಮಂಡಲದ ಗಂಗಾಧರನೆಲ್ಲೂರು ಕ್ಷೇತ್ರದ ಬಲಿಜಪಲ್ಲಿಯ ವಿವಾಹಿತ ಮಹಿಳೆ ತಿರುಪತಿಯ ಖಾಸಗಿ ಶಾಲೆಯೊಂದರಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಬಲಿಜಪಲ್ಲಿ ಮೂಲದ ವ್ಯಕ್ತಿಯೊಬ್ಬ ಕಳೆದ ವರ್ಷ ನವೆಂಬರ್ 17 ರಂದು ವಿವಾಹಿತ ಮಹಿಳೆ ಕೆಲಸ ಮಾಡುತ್ತಿದ್ದ ಶಾಲೆಗೆ ಹೋಗಿದ್ದ. ನಂತರ ಆತ ತನ್ನೊಂದಿಗೆ ಬಂದು ಬ್ಯಾಂಕ್ ಸಾಲ ತೆಗೆದುಕೊಳ್ಳುವಂತೆ ಮಹಿಳೆಗೆ ಬಲವಂತ ಮಾಡಿದ್ದಾನೆ. ಆಕೆ ನಿರಾಕರಿಸಿ ಪ್ರತಿರೋಧ ವ್ಯಕ್ತಪಡಿಸಿದಾಗ ಶಾಲೆಯ ಆವರಣದಲ್ಲಿಯೇ ಬೆದರಿಸಿ ಥಳಿಸಿ ಬಲವಂತವಾಗಿ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೊಠಡಿಯೊಂದರಲ್ಲಿ ಕೂಡಿ ಹಾಕಿ 5 ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ.