Category: ಸಿನಿಮಾ

ಕಿಚ್ಚನ ಪಂಚಾಯತಿಯಲ್ಲಿ ಯಾರಿಗೆಲ್ಲಾ ಕ್ಲಾಸ್ ತೆಗೆದುಕೊಂಡಿದ್ದು ಗೊತ್ತಾ?

Bigg Boss Kannada 10ರ ಕಿಚ್ಚನಮೊದಲ‘ವಾರದಕಥೆಕಿಚ್ಚನಜೊತೆ’ಕಾರ್ಯಕ್ರಮನಡೆಯಲಿದೆ. ಈಗಾಗಲೇವಾಹಿನಿಯುಪ್ರೋಮೋವನ್ನುರಿಲೀಸ್ಮಾಡಿದ್ದು, ಕಿಚ್ಚಆಡಿದಮಾತುಗಳುಸಖತ್ಕುತೂಹಲಮೂಡಿಸಿವೆ. ‘ದೇವರಮುಂದೆನಿಯತ್ತಾಗಿಬೇಡಿಕೊಂಡರೆ, ದೇವರೇಕ್ಷಮಿಸಿಒಂದುವರಕೊಡ್ತಾನೆ’ಎಂದುಹೇಳಲಾದಮಾತುವೈರಲ್ಆಗಿದೆ. ಆಮಾತುಗಳನ್ನುಅವರುಯಾರಿಗೆಹೇಳಿದ್ದಾರೆಎನ್ನುವುದುಪ್ರೊಮೋದಲ್ಲಿಬಳಸಲಾದದೃಶ್ಯಗಳೇಹೇಳುತ್ತವೆ ಬಿಗ್ ಬಾಸ್ ಮನೆಯಲ್ಲಿ ಕಿಚ್ಚನ ಮೊದಲ ಪಂಚಾಯತಿ. ವೀಕೆಂಡ್ ನಲ್ಲಿ ಸುದೀಪ್ (Sudeep) ಜೊತೆ ಮಾತನಾಡೋಕೆ ಬಿಗ್ ಬಾಸ್ ಸ್ಪರ್ಧಿಗಳು ತುದಿಗಾಲಲ್ಲಿ ಕಾಯುತ್ತಾರೆ. ವೀಕೆಂಡ್ ಪಂಚಾಯತಿಯಲ್ಲಿ (Kichana Panchayati) ಭಾಗಿಯಾಗಲೆಂದೇ ಹೊಸ ಹೊಸ ವಿನ್ಯಾಸದ ಕಾಸ್ಟ್ಯೂಮ್ ಅನ್ನೂ ರೆಡಿ ಮಾಡಿಕೊಂಡಿರುತ್ತಾರೆ. ಹಾಗಂತ ಕಿಚ್ಚನ ಪಂಚಾಯತಿ, ಯಾವ ವೇಳೆಯಲ್ಲೇ ಹೇಗೆ ಟರ್ನ್ ಆಗತ್ತೋ ಗೊತ್ತಿಲ್ಲ. ನಗುತ್ತಲೇ ಅಳಿಸುತ್ತಾರೆ, ಅಳಿಸುತ್ತಲೇ ನಗಿಸುತ್ತಾರೆ, ಕೋಪ ಬಂದರೆ ಮುಖಾಮೋತಿ ನೋಡದೇ ಉಗಿದು ಬಿಡುತ್ತಾರೆ ಸುದೀಪ್. ಹಾಗಾಗಿ ಕಿಚ್ಚನ ಪಂಚಾಯತಿಗಾಗಿ ಕಿರುತೆರೆ ಪ್ರೇಕ್ಷಕ ಕೂಡ ಕಾದಿರುತ್ತಾನೆ. ಬಿಗ್ ಬಾಸ್ ಸೀಸನ್ 10ರ ಮೊದಲ ಕಿಚ್ಚನ ಪಂಚಾಯತಿ ಅಂದರೆ, ‘ವಾರದ ಕಥೆ ಕಿಚ್ಚನ ಜೊತೆ’ ಇಂದು ಆರಂಭವಾಗಿದೆ. ಈಗಾಗಲೇ ಶೂಟಿಂಗ್ ಕೂಡ ನಡೆದಿದ್ದು, ಮನೆಯಲ್ಲಿದ್ದವರ ಮೇಲೆ ಕಿಚ್ಚ ಗರಂ ಆಗಿದ್ದಾರೆ ಎನ್ನುವ ಮಾಹಿತಿ ಇದೆ. ಬಿಗ್ ಬಾಸ್ ಮನೆಯೊಳಗೆ ಕಂಟೆಸ್ಟೆಂಟ್ ಬಂದು ಕೇವಲ ಒಂದು ವಾರವಾಗಿದೆಯಷ್ಟೆ. ಒಬ್ಬರಿಗೊಬ್ಬರನ್ನು ಅರ್ಥ ಮಾಡಿಕೊಳ್ಳಲು ಇದು ಅತ್ಯಂತ ಕಡಿಮೆ ಸಮಯ. ಆದರೂ, ಡ್ರೋನ್ ಪ್ರತಾಪ್ ಮೇಲೆ ಮನೆಮುಂದಿಯಲ್ಲ ಮುರಿದು ಬಿದ್ದಿದ್ದಾರೆ. ಡ್ರೋನ್‍್ ಪ್ರತಾಪ್ ಬಗ್ಗೆ ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಅವಮಾನಿಸುವಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಇವೆಲ್ಲ ಕಿಚ್ಚನ ಕೋಪಕ್ಕೆ ಕಾರಣವಾಗಿವೆ.   ಡ್ರೋನ್ ‍ಪ್ರತಾಪ್ ತಮ್ಮ ನಿಜ ಜೀವನದಲ್ಲಿ ಏನೇ ಇರಲಿ. ಆದರೆ, ಮನೆಗೆ ಬಂದಾಗ ಇತರರಂತೆ ಅವರೂ ಕೂಡ ಸ್ಪರ್ಧಿ. ಸಮಾಜದಲ್ಲಿ ಅವರಿಗೂ ಅವರದ್ದೇ ಆದ ಸ್ಥಾನವಿದೆ. ಅವರ ಖಾಸಗಿ ಬದುಕನ್ನು ಸಾಕಷ್ಟು ರೀತಿಯಲ್ಲಿ ಕೆದಕಿ ಬಿಗ್ ಬಾಸ್ ಮನೆಯಲ್ಲಿ ಅಪಮಾನ ಮಾಡಲಾಗುತ್ತಿದೆ. ಯಾರೆಲ್ಲ ಡ್ರೋನ್ ಪ್ರತಾಪ್‍ ರನ್ನು ಅವಮಾನಿಸಿದ್ದಾರೋ ಅವರಿಗೆಲ್ಲ ಮುಟ್ಟಿ ನೋಡಿಕೊಳ್ಳುವಂತಹ ಮಾತುಗಳನ್ನು ಆಡಿದ್ದಾರಂತೆ ಸುದೀಪ್. ಅಲ್ಲದೇ, ಡ್ರೋನ್ ಅವರಿಗೂ ಕಿಚ್ಚ ಕೆಲವು ಕಿವಿ ಮಾತುಗಳನ್ನು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಂತ ಇಡೀ ಎಪಿಸೋಡ್ ಕೇವಲ ಡ್ರೋನ್ ಸುತ್ತಲೇ ಸುತ್ತಿಲ್ಲ. ಕೆಲವು ಆಟಗಳನ್ನೂ ಸುದೀಪ್ ಆಡಿಸಿದ್ದಾರೆ. ಒಂದು ವಾರಗಳ ಕಾಲ, ಯಾರು ಹೇಗಿದ್ದರು ಎನ್ನುವುದನ್ನು ತಿಳಿಸಿದ್ದಾರೆ. ಸರಿ ತಪ್ಪುಗಳ ಬಗ್ಗೆ ವಿಶ್ಲೇಷಿಸಿದ್ದಾರೆ. ಕೆಲವರನ್ನು ಮೆಚ್ಚಿದ್ದಾರೆ, ಇನ್ನೂ ಕೆಲವರಿಗೆ ಮೆಚ್ಚುವಂತೆ ಇರಿ ಎಂದು ಕಿವಿ ಮಾತೂ ಹೇಳಿದ್ದಾರೆ. ಕಿಚ್ಚನ ಮೊದಲ ಪಂಚಾಯತಿ ಮಿಕ್ಸ್ ಮಸಲಾ ರೀತಿಯಲ್ಲಿ ಇದೆ ಎಂದು ಹೇಳಲಾಗುತ್ತಿದೆ. ತಮಾಷೆ ಮಾಡುತ್ತಾ, ಕಾಲೆಳೆಯುತ್ತಾ, ಮಾತಿನಲ್ಲೇ ತಿವಿಯುತ್ತಾ ವೀಕೆಂಡ್ ಎಪಿಸೋಡ್ ಅನ್ನು ಶೂಟಿಂಗ್ ಮಾಡಿದ್ದಾರಂತೆ ಸುದೀಪ್. ಆದರೆ ಈ ವಾರ, ಬಿಗ್ ಬಾಸ್ ಮನೆಯಿಂದ ಯಾರು ಆಚೆ ಬಂದಿದ್ದಾರೆ ಎನ್ನುವುದು ಮಾತ್ರ ಸದ್ಯಕ್ಕೆ ಸಸ್ಪೆನ್ಸ್.  

ಈ ಅವಕಾಶಕ್ಕಾಗಿ ನಾನು ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ: ಹಂಸಲೇಖ

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ದಸರಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹಂಸಲೇಖ, ಪೂಜ್ಯ ಕನ್ನಡಕ್ಕೆ, ಪೂಜ್ಯ ಕನ್ನಡಿಗರಿಗೆ ನನ್ನ ನಮನ. ಈ ಅವಕಾಶಕ್ಕಾಗಿ ನಾನು ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದರು. ಯಾರು ಯಾರನ್ನು ನೆನೆಯಾನಾ ? ಯಾರು ಯಾರನ್ನು ನೆನೆಯಲಿ,…

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ…

ಫೆಬ್ರವರಿಯಲ್ಲಿ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ರಿಲೀಸ್

ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು…

ದುನಿಯಾ ವಿಜಿ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್: ನಿಖಿಲ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವ ಸಲಗ!

ದುನಿಯಾ ವಿಜಯ್ (Duniya Vijay) ಇದೀಗ ಭೀಮ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯ  ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಿಖಿಲ್ ಕುಮಾರ್ ಅಭಿನಯದ ಹೊಸ ಸಿನಿಮಾದಲ್ಲಿ ವಿಜಯ್ ಪಾತ್ರವೊಂದನ್ನು ನಿರ್ವಹಿಸಲಿದ್ದಾರಂತೆ. ಅಧಿಕೃತವಾಗಿ ಸಿನಿಮಾ ತಂಡ ಈ ವಿಷಯ…

ಬಿಗ್ ಬಾಸ್ ಮನೆಯಿಂದ ಹೊರನಡೆದ ಪ್ರದೀಪ್‌ ಈಶ್ವರ್

ನಿನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು…

ಆ ಕುಟುಂಬಕ್ಕೆ ಆದ ನೋವು ನನಗೆ ಅರಿವಿದೆ: ನನಗೆ ಆ ಘಟನೆ ಅರಗಿಸಿಕೊಳ್ಳಲು ಇನ್ನೂ ಸಮಯ ಬೇಕು:ನಾಗಭೂಷಣ್!

ಅಪಘಾತದ (Car Accident) ಬಳಿಕ ನಟ ನಾಗಭೂಷಣ್ (Nagabhushan) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ನಿನ್ನೆ ಸುದ್ಧಿಗೋಷ್ಠಿ ಆಯೋಜಿಸಿದ್ದು ಘಟನೆ ಬಗ್ಗೆ ವಿವರಿಸಿದರು. ಆ ಕುಟುಂಬಕ್ಕೆ ಆದ ನೋವು ಎನ್ನುವುದು ನನಗೆ ಅರಿವಿದೆ. ಅವರ ಕುಟುಂಬದ ಹತ್ತಿರದವರ ಜೊತೆ…